ಕಾಸರಕೂಸು

ಏಕಾಂತೆಯ ತರಂಗಗಳ ಅರಸಿ..

ಮಂಗಳವಾರ, ಮಾರ್ಚ್ 23, 2021

ತೋರ್ಪಡಿಕೆ

ತೋರ್ಪಡಿಕೆ ನಾಟಕದಲ್ಲಿ
ಪ್ರಾಮಾಣಿಕತೆಯ ಅಂಗಿಯನ್ನು
ಕಳಚಿ ತೊಟ್ಟಿಕೊಂಡಿತು
ನೋಡಲು ಎಷ್ಟು ಮಿರ ಮಿರ
ನವ ನವ, ಶುಭ್ರ
ಬೀಸೋ ಗಾಳಿ, ಹರಿವ ನೀರಿಗೂ
ಅದರ ಅಂಗಿಯಲ್ಲಿರುವ
ಕಪ್ಪು ಚುಕ್ಕೆಗಳು ಕಾಣಿಸುವುದಿಲ್ಲ
ದುರ್ಬಿನ್ನೇ ಬೇಕಾದೀತು
ಗಾಂಧಿತಾತನ ನ್ಯಾಯಬೆಲೆ
ಅಂಗಡಿಯ ಸಾಬೂನುಗಳಿಂದಲೂ
ಆ ಚುಕ್ಕೆಗಳು ಮಾಸುವುದಿಲ್ಲ 
ಇನ್ನಷ್ಟು ಇಸ್ತ್ರಿ ಮಾಡಿದಂತೆ 
ಹೊಳೆಯುತ್ತದೆ 
ಅದರ ವಿಜೃಂಭಣೆಯ ಮುಂದೆ 
ಅಸಹಾಯ ಪ್ರಾಮಾಣಿಕತೆ 
ಬಾಯಿಗೆ ಬೀಗ ಜಡಿದು
ಜನ ಮನಗಳನ್ನು ಹುಡುಕುತ್ತಾ 
ಅಲೆಯುತ್ತಿರುತ್ತದೆ 
ಎಲ್ಲಿಯವರೆಗೆ...? 
ತೋರ್ಪಡಿಕೆ ಅಂಗಿಯ 
ಕಳಚಲು ಅವ, ಅವಳು 
ಕಪ್ಪು ರಂಧ್ರಗಳಿಲ್ಲದ ಹೊಸ 
ಬಿಳಿ ಅಂಗಿ ತೊಡುವವರೆಗೆ 
ಆದರಿನ್ನೂ ಅವರು ಅಂಗಿ 
ಖರೀದಿಸುವ ಯೋಚನೆಯನ್ನು 
ಮಾಡಿಲ್ಲ. 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು  ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...