ಸ್ನೇಹಿತೆಯ ಕೈಯಲ್ಲಿದ್ದ
ಕಾಸರಕೂಸು
ಸೋಮವಾರ, ಜುಲೈ 12, 2021
ಸ್ನೇಹಿತೆ
ಸ್ನೇಹಿತೆಯ ಕೈಯಲ್ಲಿದ್ದ
ಶನಿವಾರ, ಜೂನ್ 19, 2021
ಅಂಶ
ನೀ ನನ್ನೊಳಗೆ ಬೆಳೆಯಬೇಕಿತ್ತು
ಶುಕ್ರವಾರ, ಜೂನ್ 11, 2021
ಕನಸುಗಳು
ಹೆಪ್ಪು
ನೀ ಅಂದು ನಕ್ಕೆ.. !
ಗುರುವಾರ, ಜೂನ್ 3, 2021
ಬುಧವಾರ, ಜೂನ್ 2, 2021
ಉಯಿಲು
ಶುಕ್ರವಾರ, ಮೇ 21, 2021
ಮಂಗಳವಾರ, ಮೇ 18, 2021
ಮಂಗಳವಾರ, ಏಪ್ರಿಲ್ 27, 2021
ಅಪ್ಪಿ
ಶುಕ್ರವಾರ, ಏಪ್ರಿಲ್ 16, 2021
ಮಂಗಳವಾರ, ಏಪ್ರಿಲ್ 6, 2021
ಮುತ್ತುಗ
ಭಾನುವಾರ, ಮಾರ್ಚ್ 28, 2021
ಕಣ್ಣುಗಳು
ಎದುರು ಮನೆಯ ಹುಡುಗಿಯ
ಗುರುವಾರ, ಮಾರ್ಚ್ 25, 2021
ಮಂಗಳವಾರ, ಮಾರ್ಚ್ 23, 2021
ತೋರ್ಪಡಿಕೆ
ಗುರುವಾರ, ಮಾರ್ಚ್ 4, 2021
ಅನೀಫಾ
ಶನಿವಾರ, ಫೆಬ್ರವರಿ 27, 2021
ಮೌನ ಮುರಿವೆಯಾ... [ ನನ್ನದೆ ರಚನೆಯ ಭಾವಗೀತೆ ]
ಗುರುವಾರ, ಫೆಬ್ರವರಿ 25, 2021
'ದಿ ಗ್ರೇಟ್ ಇಂಡಿಯನ್ ಕಿಚನ್' ಮಲಯಾಳಂ ಮೂವಿ
ಬುಧವಾರ, ಫೆಬ್ರವರಿ 24, 2021
ರಣ ಬಿಸಿಲಿನ ಬೇಸಿಗೆಯಲ್ಲಿ ಮರಿಗುಬ್ಬಿ ತನ್ನ ತಾಯಿಯೊಂದಿಗೆ ಮರಳುಗಾಡಿನಲ್ಲಿ ನಡೆದು ಹೋಗುತಿತ್ತು. ಮರಿಗುಬ್ಬಿ ತಾಯಿ ಪ್ರೀತಿ ಅನುಮಾನಿಸಿ ಪರೀಕ್ಷಿಸಲೆಂದು ಹೇಳಿತು, ಅಮ್ಮ... ನಾನು ಹಿಂದಿರುಗಿ ಬರುವವರೆಗೂ ನೀನೊಬ್ಬಳೇ ನಿಂತ ಈ ಜಾಗದಲ್ಲೇ ನನಗಾಗಿ ಕಾಯುತ್ತಿರಬೇಕೆಂದು. ಹೆತ್ತವ್ವನಿಗೆ ಮಗುವಿನ ಮಾತಿನ ಮರ್ಮ ಅರ್ಥವಾಗದಿರುವುದೇ..? ತಾಯಿ ಗುಬ್ಬಿ ಒಪ್ಪಿಗೆ ನೀಡಿದ ಮೇಲೆ ಮರಿಗುಬ್ಬಿ ಅಲ್ಲಿಂದ ಹೊರಟು ಹೋಯಿತು. ಹಲವು ತಾಸು... ದಿನ, ರಾತ್ರಿ, ಹೀಗೆ ವಾರಗಳೇ ಕಳೆದವು. ಒಂದು ದಿನ ಮರಿಗುಬ್ಬಿಗೆ ತನ್ನ ತಾಯಿಯ ನೆನಪಾಗಿ ಮನೆಯನ್ನು ಸೇರಿತು. ಆದರೆ ಮನೆಯಲ್ಲಿ ತಾಯಿ ಇಲ್ಲದ್ದು ಕಂಡು ಆಶ್ಚರ್ಯ. ಅಕ್ಕ ಪಕ್ಕದಲ್ಲೆಲ್ಲಾ ವಿಚಾರಿಸಿ ಸೋತ ಮರಿಗುಬ್ಬಿಗೆ ನೆನಪಾಯಿತು, ತಾನು ತಾಯಿಗೆ ಹೇಳಿದ ಮಾತು. ತಕ್ಷಣ ಪುರ್ರೆಂದು ಮರಳುಗಾಡಿನ ಕಡೆ ಹಾರಿತು. ಮರಳುಗಾಡಿನಲ್ಲಿ ಆ ದಿನ ಹೇಳಿದ ಜಾಗದಲ್ಲೇ ಅಮ್ಮನ್ನನ್ನು ಕಂಡು ಮರಿಗುಬ್ಬಿಯ ಆನಂದ ಹೇಳತೀರದಾಯಿತು. ಅಮ್ಮನ ಹತ್ತಿರ ಹೋಗಿ ನೋಡಿತು, ತಾನು ಹೇಳಿದ ಜಾಗದಿಂದ ಸ್ವಲ್ಪವೂ ಅಲುಗದೆ ನಿಂತು, ಕೃಶವಾಗಿ ಮರಳಲ್ಲಿ ಹೂತು ಹೋಗಿ ಮುಖ ಮಾತ್ರ ಕಾಣುತಿತ್ತು.ಮರಿಗುಬ್ಬಿ ಅಮ್ಮಾ... ಎಂದೊಡನೆ ತನ್ನ ಮರಿಗಾಗಿ ಜೀವದ ತುದಿ ಎಳೆ ಹಿಡಿದು ಕಾಯುತ್ತಿದ್ದ ತಾಯಿಗುಬ್ಬಿ ಕೊನೆಯದಾಗಿ ಉಸುರಿತು, ಕಡು ಬಿಸಿಲು, ಮಳೆಗಳ ಕಾಯುವಿಕೆಯಲ್ಲಿ ನನ್ನಲ್ಲಿ ನೀನು ಗೆದ್ದೆ, ಆದರೆ ಮನಸ್ಸೊಳಗಿನ ಕಾಯುವಿಕೆಯಲ್ಲಿ ಕ್ಷಣ ಕ್ಷಣವೂ ಮರಳೊಳಗೆ ನೀ ಹೂತು ಹೋದೆ.
ಕ್ಷಮಿಸು
ಅಪ್ಪ
ಚೀಲ
ಶುಕ್ರವಾರ, ಫೆಬ್ರವರಿ 5, 2021
ಮುಪ್ಪು
ಶತ ಶತಮಾನಗಳಿಂದಲೂ
ಬುಧವಾರ, ಜನವರಿ 27, 2021
ಮೆರಗು ನೀಡುವ ಹಬ್ಬ ಆಚರಣೆ
ಶನಿವಾರ, ಜನವರಿ 23, 2021
ಬುಧವಾರ, ಜನವರಿ 20, 2021
ಕವಿತೆಗಳು
ಬುಧವಾರ, ಜನವರಿ 13, 2021
ಸೂರ್ಯ
ಮಂಗಳವಾರ, ಜನವರಿ 12, 2021
ಕೊಡಗಿನ ಗವಿಸಿದ್ಧೇಶ್ವರ ಬೆಟ್ಟ
ಭಾರತದ ಸ್ಕಾಟ್ಲ್ಯಾಂಡ್ ಎಂದು ಕರೆಸಿಕೊಳ್ಳುವ ಕರ್ನಾಟಕದ ಒಂದು ಪುಟ್ಟ ಜಿಲ್ಲೆ ಕೊಡಗು. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನಲ್ಲಿರುವ ಒಂದು ಪುಟ್ಟ ಗ್ರಾಮ ಆಗಳಿ. ಈ ಗ್ರಾಮವು ನಿಸರ್ಗ ರಮಣೀಯತೆಯಿಂದ ಕಂಗೊಳಿಸುತ್ತಿದೆ .ಈ ನಿಸರ್ಗ ಸೌಂದರ್ಯದ ಒಡಲಲ್ಲಿರುವುದೇ ಗವಿಸಿದ್ಧೇಶ್ವರ ಬೆಟ್ಟ. ಈ ಬೆಟ್ಟಕ್ಕೆ ಕಟ್ಟೆಪುರ ಮೀಸಲು ಅರಣ್ಯದ ನಡುವೆ ಹಾದು ಹೋಗಬೇಕು.
ಈ ಅರಣ್ಯವು ತುಂಬಾ ದಟ್ಟತೆಯನ್ನು,ಇಂದು ಉಳಿಸಿ ಕೊಂಡಿಲ್ಲವಾದರೂ ರಸ್ತೆಯಲ್ಲಿ ಸಾಗುವಾಗ ತಂಪಾದ ವಾತಾವರಣ ಮನಕ್ಕೆ ಹಿತನೀಡುತ್ತದೆ. ಗವಿಸಿದ್ಧೇಶ್ವರ ಬೆಟ್ಟಕ್ಕೆ ಸಾಗುವ ಹಾದಿಯಲ್ಲಿ ಕಾಡುಬಸವ ಹೆಸರಿನಲ್ಲಿ ಕರಿಸಿಕೊಳ್ಳುವ ಚಿಕ್ಕದಾದ ದೇವರಗುಡಿ ಒಂದು ಕಾಣಸಿಗುತ್ತದೆ. ಈ ಗುಡಿಯು ತನ್ನದೆಯಾದ ವಿಶಿಷ್ಟ್ಯವನ್ನು ಹೊಂದಿದ್ದು,
ಇಲ್ಲಿಂದ ಸ್ವಲ್ಪ ಮುಂದೆ ಸಾಗಿದರೆ ಪ್ರಕೃತಿಯ ಮಧ್ಯದಲ್ಲಿ ಮಲಗಿ ವಿಶ್ರಮಿಸಿರುವಂತೆ ಭಾಸವಾಗುವ ಮನೋಜ್ಞವಾದ ಕೆರೆಯೊಂದು ಕಾಣಸಿಗುತ್ತದೆ.
ದಂಡಿನ ಬಾವಿ ದಳವಾಯಿ ಕೆರೆ. ಹಿಂದೆ ಕೊಡಗಿನ ರಾಜನಾಗಿದ್ದ ವೀರರಾಜ ಮತ್ತು ಅವನ ಸೇನಾಧಿಕಾರಿಗಳು (ರಾಜನ ದಂಡು -ಸೇನೆ) ಸಿದ್ಧೇಶ್ವರ ದೇವರ ಆಣತಿಯಂತೆ ಒಂದು ರಾತ್ರಿಯಲ್ಲಿ ಕೆರೆಯನ್ನು ನಿರ್ಮಾಣ ಮಾಡಿದ್ದರಿಂದ, ಈ ಕೆರೆಗೆ ದಂಡಿನ ಬಾವಿ ದಳವಾಯಿ ಕೆರೆ ಎಂದು ಹೆಸರಾಗಿದೆ ಎಂದು ಇಲ್ಲಿನ ಹಿರಿಯ ಗ್ರಾಮಸ್ಥರು ಹೇಳುತ್ತಾರೆ. ಈ ಕೆರೆಯ ಸೌಂದರ್ಯವನ್ನು ಮನ ತುಂಬಿಕೊಂಡು ಮುಂದೆ ಸಾಗಿದರೆ, ರಸ್ತೆಯ ಬಲಭಾಗಕ್ಕೆ ಕಾಣುವ ಕವಲು ದಾರಿಯಲ್ಲಿ ಸ್ವಲ್ಪ ದೂರ ಪ್ರಯಾಣಿಸಿದರೆ, ನಮ್ಮನ್ನು ಎದುರ್ಗೊಳ್ಳುವುದೇ ಮನೋಹರವಾದ ಬಂಡೆಗಳಿಂದ ಕೂಡಿದ ಗವಿಸಿದ್ಧೇಶ್ವರ ಬೆಟ್ಟ .
ಅಲ್ಲಿನ ಸುತ್ತಲಿನ ಪ್ರದೇಶವೂ ದೇವರ ಕಾಡು ಎಂದು ಕರೆಸಿಕೊಳ್ಳುತ್ತದೆ. ಹೆಬ್ಬಂಡೆಗಳ ನಡುವಿರುವ ಈ ಬೆಟ್ಟವನ್ನು, ಅಲ್ಲಿಯ ಹಕ್ಕಿ -ಪಕ್ಷಿಗಳ ಕಲರವ, ಚಿಲಿಪಿಲಿ ನಾದವನ್ನು ಆಲಿಸುತ್ತಾ, ಪ್ರಕೃತಿ ಸೌಂದರ್ಯ ವನ್ನು ಆರಾಧಿಸುತ್ತಾ, ಬೆಟ್ಟವನ್ನು ಕಡಿದು ನಿರ್ಮಿಸಿರುವ ಮೆಟ್ಟಿಲುಗಳನ್ನು ಏರುತ್ತಾ ಹೋದರೆ ಕಾಣಸಿಗುವುದೇ ಸಿದ್ದೇಶ್ವರ ಸ್ವಾಮಿ ದೇವಾಲಯ. ದೇವಸ್ಥಾನದ ಗೋಡೆಗಳು ಪೂರ್ಣಪ್ರಮಾಣದಲ್ಲಿ ನೈಸರ್ಗಿಕವಾಗಿ ರಚನೆಯಾಗಿರುವ ಬಂಡೆಗಳಿಂದ ನಿರ್ಮಿಸಲ್ಪಟ್ಟಿವೆ.
ದೇವಾಲಯದ ಒಳಗೆ ಪ್ರವೇಶಿಸಿದಾಗ ಗವಿಸಿದ್ಧೇಶ್ವರ ಸ್ವಾಮಿ ಮಲಗಿರುವ ಭಂಗಿಯಲ್ಲಿ ಕಾಣಸಿಗುತ್ತದೆ. ಇಲ್ಲಿ ನಾಗದೇವತೆಯು ಹುತ್ತದ ರೂಪದಲ್ಲಿ ನೆಲೆಸಿದ್ದಾಳೆ.
ದೇವಾಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದು,ಜನಗಳ ಸದ್ದು-ಗದ್ದಲವಿಲ್ಲದೆ ನಿಶಬ್ದವಾಗಿದ್ದು, ಪ್ರಕೃತಿಯ ಸೌಂದರ್ಯವು ಮನಸ್ಸಿಗೆ ಮುದನೀಡುತ್ತದೆ. ದೇವಾಲಯದ ಹಿಂಬದಿಯಲ್ಲಿ ನಿಂತು ನೋಡಿದರೆ ಪ್ರಕೃತಿ ದೇವತೆಯೇ ಎದ್ದು ಬಂದಂತೆ ಭಾಸವಾಗುವ ಆ ಕ್ಷಣ ಮೈನವಿರೇಳಿಸುತ್ತದೆ.
ಇಲ್ಲಿ ಕಂಡುಬರುವ ಪುರಾತನ ಹೆಬ್ಬಂಡೆಗಳು ಇಲ್ಲಿಯ ಇನ್ನೊಂದು ವಿಶೇಷತೆಗಳಾಗಿವೆ. ಗ್ರಾಮಸ್ಥರ ಅಭಿಪ್ರಾಯದಲ್ಲಿ ಈ ದೇವಸ್ಥಾನದ ಐತಿಹ್ಯವನ್ನು ಹೇಳುವುದಾದರೆ ಸುಮಾರು 500 ರಿಂದ 600 ವರ್ಷಗಳ ಹಿಂದೆ ಐದು ಜನ ಶರಣರು ಭಿಕ್ಷಾಟನೆ ಮಾಡಿಕೊಂಡು ಈ ಗ್ರಾಮದಲ್ಲಿ ನೆಲೆಸಿದ್ದು, ಈ ಬೆಟ್ಟವು ಹಿಂದೆ ದಟ್ಟಾರಣ್ಯವಾಗಿದ್ದು, ಧ್ಯಾನಕ್ಕೆ ಪ್ರಶಾಂತವಾಗಿದ್ದರಿಂದ ಶರಣರು ಕಾಲಕ್ರಮೇಣ ಗ್ರಾಮಗಳನ್ನು ತೊರೆದು ಈ ಪ್ರದೇಶಕ್ಕೆ ಬಂದು ಗುಹೆಯಲ್ಲಿ ನೆಲೆ ಕಂಡುಕೊಂಡರು.
ಶರಣರು ಲೋಕ ಕಲ್ಯಾಣಾರ್ಥವಾಗಿ ಈ ಪ್ರದೇಶದಲ್ಲಿ ಶಿವನು ನೆಲೆನಿಲ್ಲಬೇಕಾಗಿ ಶಿವನನ್ನು ಕುರಿತು ತಪಸ್ಸು ಮಾಡಿದಾಗ, ಅವರ ತಪಸ್ಸಿಗೆ ಮೆಚ್ಚಿ ಸಿದ್ದೇಶ್ವರನ ರೂಪದಲ್ಲಿ ಗವಿ (ಗುಹೆ )ಯಲ್ಲಿ ಐಕ್ಯವಾಗುತ್ತಾನೆ. ಶರಣರು ಸಹ ಸಿದ್ದೇಶ್ವರನ ಸನಿಹದಲ್ಲಿ ಕಲ್ಲುಗಳ ರೂಪದಲ್ಲಿ ಐಕ್ಯವಾಗಿರುವುದನ್ನು ಕಾಣಬಹುದು. ಅಂದಿನಿಂದ ಇದು ಗವಿಸಿದ್ಧೇಶ್ವರ ಬೆಟ್ಟವೆಂದು ಕರೆಯಲ್ಪಡುತ್ತದೆ.
ಸಿದ್ಧೇಶ್ವರ ಸ್ವಾಮಿಯ ಮೂರ್ತಿ ಮತ್ತು ಬೆಟ್ಟ ಪ್ರತಿವರ್ಷ ರಾಗಿಕಾಳಿನಷ್ಟು ಬೆಳೆಯಲ್ಪಡುತ್ತಿದೆ ಎಂಬುದು ಗ್ರಾಮಸ್ಥರ ಹೇಳಿಕೆ ಮತ್ತು ನಂಬಿಕೆ.
ಪ್ರತಿವರ್ಷ ಶಿವರಾತ್ರಿಯ ಮಾರನೇ ದಿನ ಎಲ್ಲಾ ಜನಾಂಗದವರು ಸೇರಿ ಜಾತ್ರೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.
ಜನರು, ಪಟ್ಟಣಗಳ ಕಿರಿಕಿರಿ ಗದ್ದಲ ಶಬ್ದಗಳಿಂದ ಯಾವಾಗಲೂ ದೂರವಿರುವ ಈ ಬೆಟ್ಟ ನಿಸರ್ಗ ಸೌಂದರ್ಯ ಮತ್ತು ನಿಶ್ಯಬ್ದತೆಯಿಂದ ಮನಸ್ಸಿನ ಎಲ್ಲಾ ಜಂಜಾಟಗಳನ್ನು ಕ್ಷಣಕಾಲ ದೂರವಿಡಲು ಮತ್ತು ಪೋಟೋಗ್ರಫಿಯನ್ನು ಅರಸಿ ಬರುವವರಿಗೆ ಒಂದು ಆಹ್ವಾನದಂತೆ ವ್ಯಕ್ತವಾಗುತ್ತದೆ.ಅಪರೂಪಕ್ಕೊಮ್ಮೆ ಎಂಬಂತೆ ಗಜರಾಜರ ದಂಡು ದಾಳಿಮಾಡುತ್ತದೆ ಎಂಬುದನ್ನು ಬಿಟ್ಟರೆ ಇಲ್ಲಿಗೆ ತೆರಳಲು ಬೇರೆ ಇನ್ನಾವುದೇ ಭಯವಿಲ್ಲ.
ಮಂಗಳವಾರ, ಡಿಸೆಂಬರ್ 15, 2020
ಪ್ರೀತಿ
ಸೋಮವಾರ, ಡಿಸೆಂಬರ್ 7, 2020
ಹುಟ್ಟು
ನಾನು ಮಗು ನಿನ್ನ ಮಗು ನಿನ್ನ ಕುಂಬೆ ರೆಂಬೆ ಹಬ್ಬಿ ಮಗು ನಿನ್ನ ನೆನೆದು ಅಳುವ ಮಗು ನಿನ್ನ ಅಪ್ಪಿ ನಗುವ ಮಗು ನಿನ್ನ ನೋಡಿ ಕುಣಿವ ಮಗು ನಿನ್ನ ಹಸಿರ ಬನದಿ ಬೆಳೆವ ಉಸಿರ ಮ...
-
ನನ್ನನ್ನು ದೀರ್ಘವಾಗಿ ಓದಿಸಿದ ಪ್ರೀತಿಯ ಪುಸ್ತಕ ಕುವೆಂಪುರವರ "ಮಲೆಗಳಲ್ಲಿ ಮದುಮಗಳು " ಕಾದಂಬರಿ. 712 ಪುಟಗಳಿರುವ ಈ ಬೃಹತ್ ಕಾದಂಬರಿಯಲ್ಲಿ ಪಾತ್ರವ...
-
ಕ್ಷಮಿಸು ಎಂಬುದು ಆಗಾಗ್ಗೆ ಮರುಕಳಿಸುವ ಮಾರ್ದನಿ ನಮ್ಮ ಮನುಕುಲದೊಳಗೆ ಹಿಂಜರಿಕೆ, ಮುಗ್ಗರಿಕೆಗಳಿಲ್ಲ ಕ್ಷಮಿಸುವಿಕೆಯ ಅರಿವು ಪರಿವಿನ ಪಟ್ಟಿಯಲ್ಲಿ ಮುಲಾಜು ರಿಯಾಯಿತಿಗಳಿಲ...
-
ನೀ ಅಂದು ನಕ್ಕೆ.. ! ಗಾಣದಲ್ಲಿ ಸಿಕ್ಕಿದ ನಗು ಹೆಪ್ಪುಗಟ್ಟಿ ತಿರುಗಿತು ಗಾಣ ನಿಂತರೂ ಸವೆದ ದಾರಿಗಳು ಮಾಸಿಲ್ಲ ತಿರುಗುತ್ತಲೇ ಇವೆ ಒಳಗಿಳಿದ ಅದರ ಬೇರುಗಳು ನಾ ನಕ್ಕು ಚಿಗ...

































